5:34 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು