10:42 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು