5:14 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು