10:01 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ ನಿವೃತ್ತ ಸರಕಾರಿ ನೌಕರರ ಒಕ್ಕೊರಲ ನುಡಿ

01/10/2024, 14:41

ಮಂಗಳೂರು(reporterkarnataka.com): ಹಿರಿಯ ನಾಗರಿಕರ ದಿನಾಚರಣೆಯ ದಿನದಂದು ನಿವೃತ್ತ ಸರಕಾರಿ ನೌಕರರು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ಸಾಲ ನಾವೇನೂ ಕೇಳ್ತಾ ಇಲ್ಲ… ಸುದೀರ್ಘ ವರ್ಷಗಳ ಕಾಲ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಆಗ್ರಹವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದರು.


ಅವರು ಮಂಗಳವಾರ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಜು.1,2022ರಿಂದ ಜು.31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯೂಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ರಾಜ್ಯವ್ಯಾಪಿ ಪ್ರತಿಭಟನೆ, ಉಪವಾಸ ಸತ್ಯಾಗ್ರಹ*
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಿವೃತ್ತ ಸರಕಾರಿ ನೌಕರರ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಿವೃತ್ತ ಸರಕಾರಿ ನೌಕರರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನ ಸೌಧ ತನಕ ಪಾದಯಾತ್ರೆ ಹಾಗೂ ಇಲ್ಲೂ ಸರಕಾರ ಸರಿಯಾದ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಿರಿಲ್ ರಾಬರ್ಟ್ ಡಿಸೋಜ ನುಡಿದರು.
ಕೋವಿಡ್ ಸಮಯದಲ್ಲಿ ಸರಕಾರ ತುರ್ತು ಸೇವೆಗಳನ್ನು ಮಾಡಿದವರು ಸರಕಾರಿ ನೌಕರರು. ಈಗಾಗಲೇ ನಮ್ಮ ಬೇಡಿಕೆಗಳನ್ನು ತಹಸೀಲ್ದಾರ್‍ ಮೂಲಕ ಆರ್ಥಿಕ ಇಲಾಖೆಯ ವರೆಗೂ ಗಮನ ಸೆಳೆಯುವ ಕೆಲಸ ಮಾಡಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯ ವ್ಯಾಪಿ ಇಂದು ಹಿರಿಯ ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣ ಮಾಡಿದೆ. ಇದು ಮುಂದುವರಿಯದೇ ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದರು.
ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರಕಾರಿ ನೌಕರರ ಬೀದಿಗೆ ಇಳಿದು ಪ್ರತಿಭಟನೆ ಮಾಡುವಂತದ್ದು ವಿಷಾದನೀಯ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಕೊಡಬೇಕು ಎಂದು ಹೇಳಿದರು.
ನಿವೃತ್ತ ಹಿರಿಯ ಸರಕಾರಿ ನೌಕರರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷಗಳು ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನೆ ಇರಲು ಸಾಧವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದು ಹೇಳಿದರು.
ಜಿಲ್ಲಾ ಸಂಚಾಲಕ ನಾರಾಯಣ ಪೂಜಾರಿ ಮಾತನಾಡಿ, ಸರಕಾರಕ್ಕೆ ಇದು ಶೋಭೆ ತರುವ ಕೆಲಸವಲ್ಲ. ನವೇನೂ ಹೆಚ್ಚುವರಿ ಬೇಕು ಅನ್ನುತ್ತಿಲ್ಲ. ಹಕ್ಕಿನಲ್ಲಿ ಇರುವ ಸವಲತ್ತನ್ನು ನ್ಯಾಯಯುತವಾಗಿ ನೀಡಿ ಎನ್ನುವುದು ನಮ್ಮ ಮನವಿ. ಸರಕಾರದ ಯೋಜನೆಗಳನ್ನು ಜಾರಿಗೊಳಿಸುವ ಬಹಳಷ್ಟು ಕೆಲಸಗಳಲ್ಲಿ ನಮ್ಮ ಪಾತ್ರವಿದೆ ಆದರೆ ನಮ್ಮನ್ನು ಕಡೆಗಣಿಸುವುದು ಸರಿಯಲ್ಲ. ಸಮಸ್ಯೆಗೆ ಪರಿಹಾರ ನೀಡಲು ತಕ್ಷಣವೇ ಆದೇಶ ಮಾಡಬೇಕು. ಸಂಧ್ಯಾ ಕಾಲದಲ್ಲಿ ನಮಗೆ ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ ಎಂದರು.
ಸಂಚಾಲಕರಾದ ಮಂಜುಳಾ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆಯ ಬಳಿಕ ಸಂಚಾಲಕರು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ. ಮೊದಲಾದವರು ಉಪಸ್ಥಿತರಿದ್ದರು.

.
*

ಇತ್ತೀಚಿನ ಸುದ್ದಿ

ಜಾಹೀರಾತು