2:06 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಸಾಲ ಮನ್ನಾ ಘೋಷಿಸದ ಬೊಮ್ಮಾಯಿ ಬಜೆಟ್ ರೈತ ವಿರೋಧಿ: ರೈತ ಮುಖಂಡ ಮಹಾದೇವ ಮಡಿವಾಳ ಆಕ್ರೋಶ

18/02/2023, 15:07

ರಾಹುಲ್ ಅಥಣಿ ಬೆಳಗಾಗಾವಿ

info.reporterkarnataka@gmail.ಕಾಂ

ರೈತರ ಸಾಲ ಮನ್ನಾ ಮಾಡುತ್ತದೆ ಎಂದು ಬಿಜೆಪಿ ಸರ್ಕಾರದ ಮೇಲೆ ಬಹು ನಿರೀಕ್ಷೆ ಇತ್ತು. ಆದರೆ ಈ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಇದೊಂದು ರೈತ ವಿರೋಧಿ ಬಜೆಟ್ ಎಂದು ರೈತ ಮುಖಂಡ ಮಹಾದೇವ ಮಡಿವಾಳ ಬೊಮ್ಮಾಯಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಒಳಿತು ಮಾಡುತ್ತೇನೆ ಎಂದು ಹೇಳಿದ ಸರ್ಕಾರ ರೈತ ವಿರೋಧಿ ನೀತಿಗಳನ್ನು ತಂದಿರುವುದಲ್ಲದೆ ಈ ವರ್ಷದ ಬಜೆಟ್ ನಲ್ಲಿ ರೈತರಿಗೆ ಉಪಯೋಗವಾಗದ ಯೋಜನೆಯನ್ನು ಘೋಷಿಸಿ ರೈತ ಕುಲಕ್ಕೆ ಅನ್ಯಾಯ ಮಾಡಿದೆ ಎಂದು ಅವರು ಹೇಳಿದರು.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ರೂ ಕೊಡುತ್ತೇನೆ ಎಂಬುದು ಹೇಳಲು ಮಾತ್ರ ಚೆಂದ ಕೆಲವೊಂದು ಬ್ಯಾಂಕುಗಳು ರೈತರ ಒಂದು ಎಕರೆ ಹೊಲಕ್ಕೆ ಕೇವಲ 20 ಸಾವಿರಗಳನ್ನು ಮಾತ್ರ ಕೊಡುತ್ತದೆ. ಆದರೆ ಬೊಮ್ಮಾಯಿ ಅವರು ಹೇಳುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಹಿಂದೆ ಇದ್ದ ಸರ್ಕಾರ ಕೃಷಿ ಹೊಂಡಗಳಿಗೆ ಸುಮಾರು 100 ದಿನಗಳವರೆಗೆ ಕೆಲಸ ಕೊಡುತ್ತಿತ್ತು. ಆದರೆ ಇಂದು ಈ ಸರ್ಕಾರ ಆ ಯೋಜನೆಯನ್ನು ಸಹ ಕಡಿತಗೊಳಿಸಿದೆ. ಕೃಷಿ ವಿಶ್ವವಿದ್ಯಾಲಯವನ್ನು ಹೋದ ಬಜೆಟ್ಟಿನಲ್ಲಿ ಸಹ ಘೋಷಣೆಯನ್ನು ಮಾಡಿತ್ತು. ಮತ್ತೆ ಈ ಸಾರಿಯೂ ಘೋಷಣೆ ಮಾಡಿದೆ. ಹಾಗಾದರೆ ಹೋದ ಬಜೆಟ್ಟಿನಲ್ಲಿ ಘೋಷಣೆ ಮಾಡಿದ ಹಣ ಎಲ್ಲಿ ಹೋಯಿತು ಎಂಬ ಯಕ್ಷಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದರು.
ಇನ್ನೂ ಸಮಯ ಮಿಂಚಿಲ್ಲ. ರೈತರ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಕಬ್ಬಿನ ಸೂಕ್ತ ಬೆಲೆಯನ್ನು ಘೋಷಿಸಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣವಾಗಿ ಮಾಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರೈತ ಕುಲ ಈ ರೈತ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು