1:41 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ: ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ

08/07/2022, 22:30

ಬೆಂಗಳೂರು(reporterkarnataka.com): ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ‌ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಲಾಗಿದ್ದು, ಅವರಿಗೆ ರಾಜ್ಯ ಸಚಿವ‌ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕುರಿತು ಪ್ರಚಾರ ಮಾಡಲು ತಿಮ್ಮಕ್ಕ ಅವರಿಗೆ ಈ ಗೌರವವನ್ನು ಕಲ್ಪಿಸಲಾಗಿದೆ. ಅಲ್ಲದೆ, ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರವೇ ಖರ್ಚು ಭರಿಸಲಿದೆ.

ಜೂ. 3ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭ ನಡೆದಿತ್ತು. ಅಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

ಸಿಎಂ ನುಡಿದಂತೆ ಇದೀಗ ಅಧಿಕೃತ ಆದೇಶ ಹೊರಡಿಸಲಾಗಿದೆ. ಅಲ್ಲದೇ ಬಿಡಿಎ ವತಿಯಿಂದ ತಿಮ್ಮಕ್ಕ ಅವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು