4:10 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಸಾಲು ಸಾಲು ದೀಪಗಳ ಮಾಲೆ, ಆಕಾಶಬುಟ್ಟಿ: ದೀಪಾವಳಿ ಏನಿದರ ಅರ್ಥ?: ನಕರಾತ್ಮದಿಂದ ಸಕರಾತ್ಮವೇ?

03/11/2021, 07:50

ಅಸತೋಮ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ, ಅರ್ಥಾತ್ ನಮ್ಮ ಜೀವನದ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರಲಿ ಎಂದು ಸಂಭ್ರಮಿಸುವ ಒಂದು ವಿಶೇಷ ಪರ್ವ ದೀಪಾವಳಿ. 

ನಿಶೆಯನ್ನು ಹೊಡೆದೋಡಿಸುವುದು ಎಂಬ ಅರ್ಥವೂ ಇದೆ. ನಮ್ಮ ಮನದ ಋಣಾತ್ಮಕ ಭಾವಗಳನ್ನು ತೊರೆದು ಸಕಾರಾತ್ಮಕನ್ನು ಬೆಳಗಿಸಲು ದೀಪಗಳನ್ನು ಬೆಳಗುತ್ತೇವೆ. ದೀಪಾವಳಿ ಎಂದರೆ ತಕ್ಷಣ ನೆನಪಿಗೆ ಬರುವುದು ಸಾಲು ಸಾಲು ದೀಪಗಳ ಸಾಲು, ಆಕಾಶಬುಟ್ಟಿ, ಪ್ರತಿನಿತ್ಯ ಮನೆಯಲ್ಲಿ ಬೆಳಗುವ ದೀಪ ಜೀವನದ ಆಶೋತ್ತರಗಳ ದ್ಯೋತಕ. 

ನಮ್ಮ ಸಂಸ್ಕೃತಿಯಲ್ಲಿ ಯಾವುದೇ ಶುಭ ಸಮಾರಂಭ ಆರಂಭವಾಗುವುದು ದೀಪ ಬೆಳಗುವ ಮೂಲಕ. ಇಲ್ಲಿ ಬೆಳಕನ್ನು ಜೀವನ ವೃದ್ಧಿಯ ದ್ಯೋತಕವಾಗಿ ಕಾಣುತ್ತೇವೆ. ದೀಪದ ಬೆಳಕು ಯಾವಾಗಲೂ ಊರ್ಧ್ವ ಮುಖಿಯಾಗಿರುತ್ತದೆ. ಅಂದರೆ ನಾವು ದೀಪದಂತೆ ಉರಿದು ಇತರರ ಬಾಳಿಗೆ ಬೆಳಕು ನೀಡಬೇಕೆಂಬುದೇ ಆಶಯ.

ಕಾರ್ತಿಕ ಮಾಸದಲ್ಲಿ ಆಚರಿಸುವ ಈ ಹಬ್ಬದ ಜೊತೆಗೆ ಎಲ್ಲಾ ದೇವಾಲಯಗಳಲ್ಲಿಯೂ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ.

ಕಾರ್ತಿಕ ಮಾಸದುದ್ದಕ್ಕೂ ದೀಪೋತ್ಸವವನ್ನು ಆಚರಿಸಲಾಗುತ್ತದೆ.

ಭಾರತೀಯರಾದ ನಮಗೆ ದೀಪ ಎನ್ನುವುದು ಸೂರ್ಯನ ಪುಟ್ಟ ಪ್ರತಿರೂಪದಂತೆ.

ಜ್ಞಾನದ ಸಂಕೇತ ವೈರತ್ವದ ಮೇಲೆ ವಿಜಯ ಗಳಿಸಿದ ಸಂಕೇತ, ಮುಖ್ಯವಾಗಿ ನಮ್ಮೊಳಗಿನ ಎಲ್ಲಾ ದುರ್ಗುಣಗಳನ್ನು ಹೊಡೆದೋಡಿಸಿ ಬೆಳಕನ್ನು ಬೆಳಗಿಸುವ ಹಬ್ಬ.

 ಶ್ರೀರಾಮಚಂದ್ರನ ಪಟ್ಟಾಭಿಷೇಕ ನರಕಾಸುರನ ಸಂಹಾರ ಇದೆಲ್ಲವೂ ನಡೆದದ್ದು ಇದೇ ದಿನದಂದು.

ಒಟ್ಟಿನಲ್ಲಿ ದೀಪಾವಳಿಯೆಂದರೆ ಕರಾಳ ಶಕ್ತಿಗಳನ್ನು ಸಂಹರಿಸಿ ಎಲ್ಲರ ಬದುಕಿನಲ್ಲಿ ಬೆಳಕು ತಂದ ಪರ್ವದಿನ. ಈ ದೀಪಾವಳಿ ನಮಗೆಲ್ಲರಿಗೂ ಸುಖ ಸಮೃದ್ಧಿ ನೆಮ್ಮದಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ.

” ಲೋಕ ಸಮಸ್ತಾ  ಸುಖಿನೋ ಭವಂತು””

✍️

ಇತ್ತೀಚಿನ ಸುದ್ದಿ

ಜಾಹೀರಾತು