8:15 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸಾಲು ಸಾಲು ದೀಪಗಳ ಮಾಲೆ, ಆಕಾಶಬುಟ್ಟಿ: ದೀಪಾವಳಿ ಏನಿದರ ಅರ್ಥ?: ನಕರಾತ್ಮದಿಂದ ಸಕರಾತ್ಮವೇ?

03/11/2021, 07:50

ಅಸತೋಮ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ, ಅರ್ಥಾತ್ ನಮ್ಮ ಜೀವನದ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರಲಿ ಎಂದು ಸಂಭ್ರಮಿಸುವ ಒಂದು ವಿಶೇಷ ಪರ್ವ ದೀಪಾವಳಿ. 

ನಿಶೆಯನ್ನು ಹೊಡೆದೋಡಿಸುವುದು ಎಂಬ ಅರ್ಥವೂ ಇದೆ. ನಮ್ಮ ಮನದ ಋಣಾತ್ಮಕ ಭಾವಗಳನ್ನು ತೊರೆದು ಸಕಾರಾತ್ಮಕನ್ನು ಬೆಳಗಿಸಲು ದೀಪಗಳನ್ನು ಬೆಳಗುತ್ತೇವೆ. ದೀಪಾವಳಿ ಎಂದರೆ ತಕ್ಷಣ ನೆನಪಿಗೆ ಬರುವುದು ಸಾಲು ಸಾಲು ದೀಪಗಳ ಸಾಲು, ಆಕಾಶಬುಟ್ಟಿ, ಪ್ರತಿನಿತ್ಯ ಮನೆಯಲ್ಲಿ ಬೆಳಗುವ ದೀಪ ಜೀವನದ ಆಶೋತ್ತರಗಳ ದ್ಯೋತಕ. 

ನಮ್ಮ ಸಂಸ್ಕೃತಿಯಲ್ಲಿ ಯಾವುದೇ ಶುಭ ಸಮಾರಂಭ ಆರಂಭವಾಗುವುದು ದೀಪ ಬೆಳಗುವ ಮೂಲಕ. ಇಲ್ಲಿ ಬೆಳಕನ್ನು ಜೀವನ ವೃದ್ಧಿಯ ದ್ಯೋತಕವಾಗಿ ಕಾಣುತ್ತೇವೆ. ದೀಪದ ಬೆಳಕು ಯಾವಾಗಲೂ ಊರ್ಧ್ವ ಮುಖಿಯಾಗಿರುತ್ತದೆ. ಅಂದರೆ ನಾವು ದೀಪದಂತೆ ಉರಿದು ಇತರರ ಬಾಳಿಗೆ ಬೆಳಕು ನೀಡಬೇಕೆಂಬುದೇ ಆಶಯ.

ಕಾರ್ತಿಕ ಮಾಸದಲ್ಲಿ ಆಚರಿಸುವ ಈ ಹಬ್ಬದ ಜೊತೆಗೆ ಎಲ್ಲಾ ದೇವಾಲಯಗಳಲ್ಲಿಯೂ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ.

ಕಾರ್ತಿಕ ಮಾಸದುದ್ದಕ್ಕೂ ದೀಪೋತ್ಸವವನ್ನು ಆಚರಿಸಲಾಗುತ್ತದೆ.

ಭಾರತೀಯರಾದ ನಮಗೆ ದೀಪ ಎನ್ನುವುದು ಸೂರ್ಯನ ಪುಟ್ಟ ಪ್ರತಿರೂಪದಂತೆ.

ಜ್ಞಾನದ ಸಂಕೇತ ವೈರತ್ವದ ಮೇಲೆ ವಿಜಯ ಗಳಿಸಿದ ಸಂಕೇತ, ಮುಖ್ಯವಾಗಿ ನಮ್ಮೊಳಗಿನ ಎಲ್ಲಾ ದುರ್ಗುಣಗಳನ್ನು ಹೊಡೆದೋಡಿಸಿ ಬೆಳಕನ್ನು ಬೆಳಗಿಸುವ ಹಬ್ಬ.

 ಶ್ರೀರಾಮಚಂದ್ರನ ಪಟ್ಟಾಭಿಷೇಕ ನರಕಾಸುರನ ಸಂಹಾರ ಇದೆಲ್ಲವೂ ನಡೆದದ್ದು ಇದೇ ದಿನದಂದು.

ಒಟ್ಟಿನಲ್ಲಿ ದೀಪಾವಳಿಯೆಂದರೆ ಕರಾಳ ಶಕ್ತಿಗಳನ್ನು ಸಂಹರಿಸಿ ಎಲ್ಲರ ಬದುಕಿನಲ್ಲಿ ಬೆಳಕು ತಂದ ಪರ್ವದಿನ. ಈ ದೀಪಾವಳಿ ನಮಗೆಲ್ಲರಿಗೂ ಸುಖ ಸಮೃದ್ಧಿ ನೆಮ್ಮದಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ.

” ಲೋಕ ಸಮಸ್ತಾ  ಸುಖಿನೋ ಭವಂತು””

✍️

ಇತ್ತೀಚಿನ ಸುದ್ದಿ

ಜಾಹೀರಾತು