1:13 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು

07/08/2023, 16:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ.
ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ನೆರವಾಗಿದ್ದಾರೆ. ಸಹನಾ ಅವರು ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ್ದಾರೆ. ಸಹನಾ ಅವರ ಅಂಗಾಂಗಗಳನ್ನು ಬೆಂಗಳೂರು ಹಾಗೂ ಮಂಗಳೂರಿಗೆ ರವಾನೆಯಾಗಲಿದೆ. ಕಣ್ಣು, ಕಿಡ್ನಿ ಹಾಗೂ ಲಿವರ್ ಸೇರಿ ಒಟ್ಟು 5 ಅಂಗಗಳ ದಾನ ಮಾಡಲಾಗಿದೆ.


2ನೇ ಬಾರಿ ಅಂಗಾಂಗ ರವಾನೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ಒಂಬತ್ತು ತಿಂಗಳ ಹಿಂದೆ ಯುವತಿ ರಕ್ಷಿತಾಬಾಯಿ ಅಂಗಾಂಗಗಳನ್ನ ರವಾನೆ ಮಾಡಲಾಗಿತ್ತು.
ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ರವಾನೆ ಮಾಡಿದ ಮೊದಲ ಜಿಲ್ಲೆ ಕಾಫಿನಾಡು ಎಂಬ ಹೆಗ್ಗಳಿಕೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು