5:19 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು

07/08/2023, 16:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ.
ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ನೆರವಾಗಿದ್ದಾರೆ. ಸಹನಾ ಅವರು ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ್ದಾರೆ. ಸಹನಾ ಅವರ ಅಂಗಾಂಗಗಳನ್ನು ಬೆಂಗಳೂರು ಹಾಗೂ ಮಂಗಳೂರಿಗೆ ರವಾನೆಯಾಗಲಿದೆ. ಕಣ್ಣು, ಕಿಡ್ನಿ ಹಾಗೂ ಲಿವರ್ ಸೇರಿ ಒಟ್ಟು 5 ಅಂಗಗಳ ದಾನ ಮಾಡಲಾಗಿದೆ.


2ನೇ ಬಾರಿ ಅಂಗಾಂಗ ರವಾನೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ಒಂಬತ್ತು ತಿಂಗಳ ಹಿಂದೆ ಯುವತಿ ರಕ್ಷಿತಾಬಾಯಿ ಅಂಗಾಂಗಗಳನ್ನ ರವಾನೆ ಮಾಡಲಾಗಿತ್ತು.
ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ರವಾನೆ ಮಾಡಿದ ಮೊದಲ ಜಿಲ್ಲೆ ಕಾಫಿನಾಡು ಎಂಬ ಹೆಗ್ಗಳಿಕೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು