10:20 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು

07/08/2023, 16:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ.
ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ನೆರವಾಗಿದ್ದಾರೆ. ಸಹನಾ ಅವರು ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ್ದಾರೆ. ಸಹನಾ ಅವರ ಅಂಗಾಂಗಗಳನ್ನು ಬೆಂಗಳೂರು ಹಾಗೂ ಮಂಗಳೂರಿಗೆ ರವಾನೆಯಾಗಲಿದೆ. ಕಣ್ಣು, ಕಿಡ್ನಿ ಹಾಗೂ ಲಿವರ್ ಸೇರಿ ಒಟ್ಟು 5 ಅಂಗಗಳ ದಾನ ಮಾಡಲಾಗಿದೆ.


2ನೇ ಬಾರಿ ಅಂಗಾಂಗ ರವಾನೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ಒಂಬತ್ತು ತಿಂಗಳ ಹಿಂದೆ ಯುವತಿ ರಕ್ಷಿತಾಬಾಯಿ ಅಂಗಾಂಗಗಳನ್ನ ರವಾನೆ ಮಾಡಲಾಗಿತ್ತು.
ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ರವಾನೆ ಮಾಡಿದ ಮೊದಲ ಜಿಲ್ಲೆ ಕಾಫಿನಾಡು ಎಂಬ ಹೆಗ್ಗಳಿಕೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು