10:53 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು