6:42 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು