1:09 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು