9:26 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು

11/04/2025, 17:14

ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ‌ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ‌ ವಾಸವಾಗಿದ್ದರು.
ಬಿ.ಸಿ.ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ‌ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯ ದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು,ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು