2:36 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸಭೆಗಳಿಗೆ ಗೈರಾಗಿ ಕಳ್ಳಾಟವಾಡುವ ಅಧಿಕಾರಿಗಳೇ ತಾಲೂಕು ಬಿಟ್ಟು ತೊಲಗಿ: ಶಾಸಕ ದರ್ಶನ್ ಖಡಕ್ ಎಚ್ಚರಿಕೆ

08/08/2024, 23:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆಯ ನಂಜನಗೂಡು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ ಎಂಬುವುದನ್ನು ತಾಲೂಕು ಮಟ್ಟದ ಅಧಿಕಾರಿಗಳು ಮರೆಯಬಾರದು. ಜಾಗೃತಿಯಿಂದ ಮತ್ತು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ.


ಕಳ್ಳಾಟವಾಡಿ ದಿನದೊಡುತ್ತೇವೆ, ಸಂಬಳ ಪಡೆಯುತ್ತೇವೆ ಎಂಬ ಮನಸ್ಥಿತಿ ಇರುವ ಅಧಿಕಾರಿಗಳೇ ನೀವಾಗಿ ನೀವೇ ತಾಲೂಕು ಬಿಟ್ಟು ತೊಲಗಿ ಎಂದು ಖಡಕ್ಕಾಗಿ ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಗೈರಾದ ಅಧಿಕಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಎಚ್ಚರಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ಮತ್ತು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.
ಸಭೆಯಲ್ಲಿ ಕೆಲವೇ ಕೆಲವು ಅಧಿಕಾರಿಗಳು ಮಾತ್ರ ಹಾಜರಿದ್ದರು. ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ರೀತಿಯಲ್ಲಿ ಹಾಜರಿದ್ದರು. ಇದನ್ನು ಗಮನಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ತಿಂಗಳ 15ರಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲು ತಾಲೂಕು ಆಡಳಿತ ಮುಂದಾಗಿದೆ ಪ್ರತಿ ವರ್ಷದಂತೆ ನಡೆಯುವ ಕಾರ್ಯಕ್ರಮದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅತಿ ಹೆಚ್ಚು ಶಿಕ್ಷಣ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೆ ವೇಳೆಗೆ ನಡೆಸಿ ಸಂಭ್ರಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಧ್ವಜಾರೋಹಣ ಕಾರ್ಯಕ್ರಮ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಪಥಸಂಚಲನ ಹಾಗೂ ವಿವಿಧ ಬಗೆಯ ಜಾಗೃತಿ ಸಂದೇಶಗಳನ್ನು ತಿಳಿಸುವ ಕಾರ್ಯಕ್ರಮಗಳನ್ನು ಕೂಡ ಮಾಡಲು ತಯಾರಿ ನಡೆಸಲಾಗಿದೆ. ಇಂತಹ ಪ್ರಮುಖ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಪೂರ್ವಭಾವಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಬಳಿ ವಿಚಾರ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕ್ರಮದಲ್ಲಿ ಗೈರಾಗಿರುವ ಅಧಿಕಾರಿಗಳ ಪಟ್ಟಿ ಮಾಡಿ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ರವರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಸಭೆಯಲ್ಲಿ ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಿಡಿಪಿಒ ಭವ್ಯಶ್ರೀ, ನಗರಸಭಾ ಆಯುಕ್ತ ನಂಜುಂಡಸ್ವಾಮಿ, ಪಿಎಸ್ಐ ಪ್ರಕಾಶ್ ಸಿದ್ದಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು