1:49 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಭೆಗಳಿಗೆ ಗೈರಾಗಿ ಕಳ್ಳಾಟವಾಡುವ ಅಧಿಕಾರಿಗಳೇ ತಾಲೂಕು ಬಿಟ್ಟು ತೊಲಗಿ: ಶಾಸಕ ದರ್ಶನ್ ಖಡಕ್ ಎಚ್ಚರಿಕೆ

08/08/2024, 23:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆಯ ನಂಜನಗೂಡು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ ಎಂಬುವುದನ್ನು ತಾಲೂಕು ಮಟ್ಟದ ಅಧಿಕಾರಿಗಳು ಮರೆಯಬಾರದು. ಜಾಗೃತಿಯಿಂದ ಮತ್ತು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ.


ಕಳ್ಳಾಟವಾಡಿ ದಿನದೊಡುತ್ತೇವೆ, ಸಂಬಳ ಪಡೆಯುತ್ತೇವೆ ಎಂಬ ಮನಸ್ಥಿತಿ ಇರುವ ಅಧಿಕಾರಿಗಳೇ ನೀವಾಗಿ ನೀವೇ ತಾಲೂಕು ಬಿಟ್ಟು ತೊಲಗಿ ಎಂದು ಖಡಕ್ಕಾಗಿ ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಗೈರಾದ ಅಧಿಕಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಎಚ್ಚರಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ಮತ್ತು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.
ಸಭೆಯಲ್ಲಿ ಕೆಲವೇ ಕೆಲವು ಅಧಿಕಾರಿಗಳು ಮಾತ್ರ ಹಾಜರಿದ್ದರು. ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ರೀತಿಯಲ್ಲಿ ಹಾಜರಿದ್ದರು. ಇದನ್ನು ಗಮನಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ತಿಂಗಳ 15ರಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲು ತಾಲೂಕು ಆಡಳಿತ ಮುಂದಾಗಿದೆ ಪ್ರತಿ ವರ್ಷದಂತೆ ನಡೆಯುವ ಕಾರ್ಯಕ್ರಮದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅತಿ ಹೆಚ್ಚು ಶಿಕ್ಷಣ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೆ ವೇಳೆಗೆ ನಡೆಸಿ ಸಂಭ್ರಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಧ್ವಜಾರೋಹಣ ಕಾರ್ಯಕ್ರಮ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಪಥಸಂಚಲನ ಹಾಗೂ ವಿವಿಧ ಬಗೆಯ ಜಾಗೃತಿ ಸಂದೇಶಗಳನ್ನು ತಿಳಿಸುವ ಕಾರ್ಯಕ್ರಮಗಳನ್ನು ಕೂಡ ಮಾಡಲು ತಯಾರಿ ನಡೆಸಲಾಗಿದೆ. ಇಂತಹ ಪ್ರಮುಖ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಪೂರ್ವಭಾವಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಬಳಿ ವಿಚಾರ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕ್ರಮದಲ್ಲಿ ಗೈರಾಗಿರುವ ಅಧಿಕಾರಿಗಳ ಪಟ್ಟಿ ಮಾಡಿ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ರವರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಸಭೆಯಲ್ಲಿ ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಿಡಿಪಿಒ ಭವ್ಯಶ್ರೀ, ನಗರಸಭಾ ಆಯುಕ್ತ ನಂಜುಂಡಸ್ವಾಮಿ, ಪಿಎಸ್ಐ ಪ್ರಕಾಶ್ ಸಿದ್ದಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು