2:12 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

‘ಸಂಚಾರಿ’ ಗೆ ಕೊನೆಯ ಸಲಾಂ: ಮಿಂಚಿ ಮರೆಯಾದ  ಅದ್ಬುತ ನಟ ವಿಜಯ್ ಹುಟ್ಟೂರು ಪಂಚಮಹಳ್ಳಿಯಲ್ಲಿ ಲೀನ

15/06/2021, 16:02

ಶ್ರದ್ಧಾ ಎಸ್. ಪಾಟೀಲ್ ಹುಳಿಮಾವು

info.reporterkarnataka@gmail.com

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಮಹಾನ್ ಕನಸುಗಾರ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ ಮಂಗಳವಾರ ಸಕಲ ಗೌರವದೊಂದಿಗೆ ನಡೆಯಿತು.

ವಿಜಯ್ ಅವರ ಪ್ರಾಣ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ವೀರಶೈವ ಲಿಂಗಾಯಿತ ಸಂಪ್ರದಾಯದ ಪ್ರಕಾರ ವಿಜಯ ಅವರ ಸಮಾಧಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಜಯ್ ಅವರ ಕುಟುಂಬ, ಬಂಧು ಮಿತ್ರರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತು. ನೆರೆದವರ ಕಣ್ಣಾಲಿಗಳು ಕೂಡ ತೇವಗೊಂಡಿತು.

ಮಾಜಿ ಶಾಸಕ ವೈ.ಎಸ್. ವಿ.ದತ್ತಾ ಎಲ್ಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಚಿತ್ರ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ ಮುಂತಾದವರು ಉಪಸ್ಥಿತರಿದ್ದರು.


ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರವನ್ನು ನಂತರ ಅಂಬುಲೆನ್ಸ್ ಮೂಲಕ ಪಂಚಮಹಳ್ಳಿಗೆ ಕೊಂಡೊಯ್ಯಲಾಯಿತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಸಂಚಾರಿ ವಿಜಯ್ ತೀವ್ರವಾಗಿ ಗಾಯಗೊಂಡಿದ್ದರು. ತಲೆಗೆ ಬಿದ್ದ ಬಲವಾದ ಏಟಿನಿಂದ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿತ್ತು.ತಕ್ಷಣ ಅವರಿಗೆ ಅಪೊಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆ ನಡೆದು 10 ತಾಸು ಕಳೆದರೂ ವಿಜಯ್ ಚಿಕಿತ್ಸೆಗೆ ಸ್ಪಂದಿಸಿಲ್ಲ. ನಂತರ ವೈದ್ಯರು ಬ್ರೈನ್ ಡೆಡ್ ಅಂತ ಘೋಷಿಸಿದರು. ಈ ನಡುವೆ ವಿಜಯ್ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು. ಸಾವಿನಲ್ಲೂ ವಿಜಯ್ ಸಾರ್ಥಕತೆ ಕಂಡರು. ಜೀವ ಸಾರ್ಥಕ್ ಫೌಂಡೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಸಂಚಾರಿ ವಿಜಯ್ ಅವರು ‘ರಂಗಪ್ಪ ಹೋಗಿಬಿಟ್ನಾ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಪ್ರಸಿದ್ಧರಾಗಿದ್ದರು. ಸುಮಾರು 24 ಸಿನಿಮಾಗಳಲ್ಲಿ ಅವರು ನಟಿಸಿದ್ದರು. ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇವತ್ತು ಅವರ ‘ತಲೆದಂಡ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ವಿಜಯ್ ಅವರು ಬುದ್ದಿಮಾಂದ್ಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು