10:15 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

‘ಸಂಚಾರಿ’ ಗೆ ಕೊನೆಯ ಸಲಾಂ: ಮಿಂಚಿ ಮರೆಯಾದ  ಅದ್ಬುತ ನಟ ವಿಜಯ್ ಹುಟ್ಟೂರು ಪಂಚಮಹಳ್ಳಿಯಲ್ಲಿ ಲೀನ

15/06/2021, 16:02

ಶ್ರದ್ಧಾ ಎಸ್. ಪಾಟೀಲ್ ಹುಳಿಮಾವು

info.reporterkarnataka@gmail.com

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಮಹಾನ್ ಕನಸುಗಾರ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ ಮಂಗಳವಾರ ಸಕಲ ಗೌರವದೊಂದಿಗೆ ನಡೆಯಿತು.

ವಿಜಯ್ ಅವರ ಪ್ರಾಣ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ವೀರಶೈವ ಲಿಂಗಾಯಿತ ಸಂಪ್ರದಾಯದ ಪ್ರಕಾರ ವಿಜಯ ಅವರ ಸಮಾಧಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಜಯ್ ಅವರ ಕುಟುಂಬ, ಬಂಧು ಮಿತ್ರರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತು. ನೆರೆದವರ ಕಣ್ಣಾಲಿಗಳು ಕೂಡ ತೇವಗೊಂಡಿತು.

ಮಾಜಿ ಶಾಸಕ ವೈ.ಎಸ್. ವಿ.ದತ್ತಾ ಎಲ್ಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಚಿತ್ರ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ ಮುಂತಾದವರು ಉಪಸ್ಥಿತರಿದ್ದರು.


ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರವನ್ನು ನಂತರ ಅಂಬುಲೆನ್ಸ್ ಮೂಲಕ ಪಂಚಮಹಳ್ಳಿಗೆ ಕೊಂಡೊಯ್ಯಲಾಯಿತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಸಂಚಾರಿ ವಿಜಯ್ ತೀವ್ರವಾಗಿ ಗಾಯಗೊಂಡಿದ್ದರು. ತಲೆಗೆ ಬಿದ್ದ ಬಲವಾದ ಏಟಿನಿಂದ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿತ್ತು.ತಕ್ಷಣ ಅವರಿಗೆ ಅಪೊಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆ ನಡೆದು 10 ತಾಸು ಕಳೆದರೂ ವಿಜಯ್ ಚಿಕಿತ್ಸೆಗೆ ಸ್ಪಂದಿಸಿಲ್ಲ. ನಂತರ ವೈದ್ಯರು ಬ್ರೈನ್ ಡೆಡ್ ಅಂತ ಘೋಷಿಸಿದರು. ಈ ನಡುವೆ ವಿಜಯ್ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು. ಸಾವಿನಲ್ಲೂ ವಿಜಯ್ ಸಾರ್ಥಕತೆ ಕಂಡರು. ಜೀವ ಸಾರ್ಥಕ್ ಫೌಂಡೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಸಂಚಾರಿ ವಿಜಯ್ ಅವರು ‘ರಂಗಪ್ಪ ಹೋಗಿಬಿಟ್ನಾ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಪ್ರಸಿದ್ಧರಾಗಿದ್ದರು. ಸುಮಾರು 24 ಸಿನಿಮಾಗಳಲ್ಲಿ ಅವರು ನಟಿಸಿದ್ದರು. ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇವತ್ತು ಅವರ ‘ತಲೆದಂಡ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ವಿಜಯ್ ಅವರು ಬುದ್ದಿಮಾಂದ್ಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು