8:45 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

‘ಸಂಚಾರಿ’ ಗೆ ಕೊನೆಯ ಸಲಾಂ: ಮಿಂಚಿ ಮರೆಯಾದ  ಅದ್ಬುತ ನಟ ವಿಜಯ್ ಹುಟ್ಟೂರು ಪಂಚಮಹಳ್ಳಿಯಲ್ಲಿ ಲೀನ

15/06/2021, 16:02

ಶ್ರದ್ಧಾ ಎಸ್. ಪಾಟೀಲ್ ಹುಳಿಮಾವು

info.reporterkarnataka@gmail.com

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಮಹಾನ್ ಕನಸುಗಾರ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ ಮಂಗಳವಾರ ಸಕಲ ಗೌರವದೊಂದಿಗೆ ನಡೆಯಿತು.

ವಿಜಯ್ ಅವರ ಪ್ರಾಣ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ವೀರಶೈವ ಲಿಂಗಾಯಿತ ಸಂಪ್ರದಾಯದ ಪ್ರಕಾರ ವಿಜಯ ಅವರ ಸಮಾಧಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಜಯ್ ಅವರ ಕುಟುಂಬ, ಬಂಧು ಮಿತ್ರರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತು. ನೆರೆದವರ ಕಣ್ಣಾಲಿಗಳು ಕೂಡ ತೇವಗೊಂಡಿತು.

ಮಾಜಿ ಶಾಸಕ ವೈ.ಎಸ್. ವಿ.ದತ್ತಾ ಎಲ್ಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಚಿತ್ರ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ ಮುಂತಾದವರು ಉಪಸ್ಥಿತರಿದ್ದರು.


ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರವನ್ನು ನಂತರ ಅಂಬುಲೆನ್ಸ್ ಮೂಲಕ ಪಂಚಮಹಳ್ಳಿಗೆ ಕೊಂಡೊಯ್ಯಲಾಯಿತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಸಂಚಾರಿ ವಿಜಯ್ ತೀವ್ರವಾಗಿ ಗಾಯಗೊಂಡಿದ್ದರು. ತಲೆಗೆ ಬಿದ್ದ ಬಲವಾದ ಏಟಿನಿಂದ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿತ್ತು.ತಕ್ಷಣ ಅವರಿಗೆ ಅಪೊಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆ ನಡೆದು 10 ತಾಸು ಕಳೆದರೂ ವಿಜಯ್ ಚಿಕಿತ್ಸೆಗೆ ಸ್ಪಂದಿಸಿಲ್ಲ. ನಂತರ ವೈದ್ಯರು ಬ್ರೈನ್ ಡೆಡ್ ಅಂತ ಘೋಷಿಸಿದರು. ಈ ನಡುವೆ ವಿಜಯ್ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು. ಸಾವಿನಲ್ಲೂ ವಿಜಯ್ ಸಾರ್ಥಕತೆ ಕಂಡರು. ಜೀವ ಸಾರ್ಥಕ್ ಫೌಂಡೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಸಂಚಾರಿ ವಿಜಯ್ ಅವರು ‘ರಂಗಪ್ಪ ಹೋಗಿಬಿಟ್ನಾ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಪ್ರಸಿದ್ಧರಾಗಿದ್ದರು. ಸುಮಾರು 24 ಸಿನಿಮಾಗಳಲ್ಲಿ ಅವರು ನಟಿಸಿದ್ದರು. ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇವತ್ತು ಅವರ ‘ತಲೆದಂಡ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ವಿಜಯ್ ಅವರು ಬುದ್ದಿಮಾಂದ್ಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು