7:50 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಭೇಟಿಯಾದ ಸಚಿನ್ ತೆಂಡೂಲ್ಕರ್: ಅರ್ಜುನ್-ಸಾನಿಯಾ ವಿವಾಹಕ್ಕೆ ಆಹ್ವಾನ

10/02/2026, 23:32

ನವದೆಹಲಿ(reporterkarnataka.com): ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪುತ್ರ ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಅವರ ಮದುವೆಗೆ ಆಹ್ವಾನಿಸಿದ್ದಾರೆ.
ಅರ್ಜುನ್-ಸಾನಿಯಾ ವಿವಾಹಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸಚಿನ್ ತೆಂಡೂಲ್ಕರ್ ಮತ್ತು ಕುಟುಂಬ ಭೇಟಿ ಮಾಡಿದೆ. ಭಾರತೀಯ ಕ್ರೀಡೆ ಮತ್ತು ರಾಷ್ಟ್ರೀಯ ನಾಯಕತ್ವದ ಜಗತ್ತನ್ನು ಬೆಸೆಯುವ ಈ ಕ್ಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿನ್, ಅರ್ಜುನ್ ತೆಂಡೂಲ್ಕರ್ ಮತ್ತು ಅವರ ಸಾನಿಯಾ ಚಾಂದೋಕ್ ಅವರನ್ನು ಆಶೀರ್ವದಿಸಲು ಕೋರಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಅವರ ಪೋಸ್ಟ್ ಮೂಲಕ ದೃಢಪಡಿಸಿದ ಈ ಭೇಟಿಯು ಮುಂಬರುವ ವಿವಾಹ ಸಂಭ್ರಮಕ್ಕೆ ಅಧಿಕೃತವಾಗಿ ವೇದಿಕೆಯನ್ನು ಸಿದ್ಧಪಡಿಸಿದೆ.
ಪ್ರಧಾನಿ ಮತ್ತು ಯುವ ದಂಪತಿಗಳ ಜೊತೆಗೆ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರನ್ನು ಒಳಗೊಂಡ ಹೃದಯಸ್ಪರ್ಶಿ ಕುಟುಂಬದ ಛಾಯಾಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಭೇಟಿ ಮತ್ತು ಕುಟುಂಬದೊಂದಿಗೆ ಪ್ರಧಾನಿ ಕಳೆದ ಸಮಯಕ್ಕೆ ಸಚಿನ್ ಕೃತಜ್ಞತೆ ಸಲ್ಲಿಸಿದ್ದಾರೆ.
ತಮ್ಮ ದೆಹಲಿ ಭೇಟಿ ವೇಳೆ ಸಚಿನ್ ಪತ್ನಿಯೊಂದಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.
ಅರ್ಜುನ್ ಮತ್ತು ಸಾನಿಯಾ ಅವರ ವಿವಾಹಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಮೋದಿ ಜಿ, ನಿಮ್ಮ ಆಶೀರ್ವಾದ ಮತ್ತು ಯುವ ದಂಪತಿಗೆ ಚಿಂತನಶೀಲ ಸಲಹೆಗಾಗಿ ಧನ್ಯವಾದಗಳು ಎಂದು ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್‌ ನೊಂದಿಗೆ ವೃತ್ತಿಪರ ಕ್ರಿಕೆಟ್‌ನಲ್ಲಿ ತನ್ನದೇ ಆದ ಹಾದಿಯಲ್ಲಿ ಸಾಗಿರುವ ಅರ್ಜುನ್ ಮತ್ತು ಉದ್ಯಮಿ ಸಾನಿಯಾ ಅವರನ್ನು ವರಿಸಲಿದ್ದಾರೆ. ಸಾನಿಯಾ ಚಾಂದೋಕ್ ಲಂಡನ್ ಸ್ಕೂಲ್ಆಫ್ಎಕನಾಮಿಕ್ಸ್(ಎಲ್‌ಎಸ್‌ಇ) ಪದವೀಧರೆ ಮತ್ತು ಯಶಸ್ವಿ ಪಶುವೈದ್ಯಕೀಯ ತಂತ್ರಜ್ಞೆ. ಅವರು ಮುಂಬೈನಲ್ಲಿರುವ ಪ್ರೀಮಿಯಂ ಸಾಕುಪ್ರಾಣಿ ಆರೈಕೆ ಉದ್ಯಮವಾದ ಮಿಸ್ಟರ್ ಪಾವ್ಸ್ ಪೆಟ್ ಸ್ಪಾ & ಸ್ಟೋರ್‌ನ ಸ್ಥಾಪಕಿ. ಗ್ರಾವಿಸ್ ಗ್ರೂಪ್‌ನ ಅಧ್ಯಕ್ಷ ರವಿ ಘಾಯ್(ಕ್ವಾಲಿಟಿ ಐಸ್ ಕ್ರೀಮ್ ಮತ್ತು ಇಂಟರ್‌ಕಾಂಟಿನೆಂಟಲ್ ಹೋಟೆಲ್, ಮುಂಬೈನಂತಹ ಬ್ರ್ಯಾಂಡ್‌ಗಳ ಮಾಲೀಕರು) ಮೊಮ್ಮಗಳಾಗಿ ಸಾನಿಯಾ ಬಲವಾದ ವ್ಯಾಪಾರ ಪರಂಪರೆಯನ್ನು ಹೊಂದಿದ್ದಾರೆ. ಅವರು ಹಲವಾರು ವರ್ಷಗಳಿಂದ ತೆಂಡೂಲ್ಕರ್ ಕುಟುಂಬದ, ವಿಶೇಷವಾಗಿ ಸಾರಾ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು