7:23 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ

12/04/2022, 13:51

ಉಡುಪಿ(reporterkarnataka.com): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದಿದ್ದರು. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈಶ್ವರಪ್ಪ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ ಸಂತೋಷ್ ಪಾಟೀಲ್ ಕುಟುಂಬ ನಾಪತ್ತೆಯಾಗಿತ್ತು. ಸೋಮವಾರ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಸಂತೋಷ್ ಪಾಟೀಲ್ ಅವರ ಮೊಬೈಲ್ ಫೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಮಾಡುತ್ತಿರಲಿಲ್ಲ. ಮೊಬೈಲ್ ಲೊಕೇಶನ್ ಉಡುಪಿಯನ್ನು ತೋರಿಸುತ್ತಿತ್ತು. ಇದೇ ಜಾಡು ಹಿಡಿದು ಪೊಲೀಸರು ತನಿಖೆ ಆರಂಭಿಸಿದ್ದರು. ಇದೀಗ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ. ಅವರಿಗೆ ಶಿಕ್ಷೆಯಾಗಬೇಕು. ತನ್ನ ಹೆಂಡತಿ- ಮಕ್ಕಳಿಗೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಅವರು ವ್ಯವಸ್ಥೆ ಮಾಡಿಕೊಡಬೇಕಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು