6:31 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್

03/10/2022, 16:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಳ್ಳಿ ಗ್ರಾಮದಲ್ಲಿ 21.40 ಕೋಟಿ ವೆಚ್ಚದ ಪಾರ್ಥನಳ್ಳಿ ಹಳೆ ಕಿರಣಗಿ ರಸ್ತೆ , 212 ಲಕ್ಷ ವೆಚ್ಚದ ಪಾರ್ಥನಳ್ಳಿ ಜಾಧವ ತೋಟದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಾಗವಾಡ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದಾಗಿದೆ, ಮೂಲ ಸೌಲಭ್ಯ ಗಳಾದ ರಸ್ತೆ , ಕುಡಿಯುವ ನೀರು , ಚರಂಡಿ, ಶಾಲಾ ಕಟ್ಟಡ, ಶೌಚಾಲಯ, ರೈತರ ಜಮೀನುಗಳಿಗೆ ನೀರಾವರಿ, ಶಿಕ್ಷಕರ ನೇಮಕಾತಿ , ಆಸ್ಪತ್ರೆ ಸೇರಿದಂತೆ ಹಲವಾ ರು ಸೌಲಭ್ಯಗಳು ಜನರಿಗೆ ದೊರೆಯಬೇಕು.

ಇದೇ ಸಂದರ್ಭದಲ್ಲಿ ಜ್ಯೋತಿ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಪಂಚಾಯತ್ ರಾಜ್ಯ ಇಲಾಖೆಯ ಅಭಿಯಂತರ ವೀರಣ್ಣ ವಾಲಿ, ಎಸ್ . ಎ.ಸಾಂವಗಾಂವ, ಮಾಜಿ ತಾಲೂಕಾ ಪಂಚಾಯಿತಿ ಸದಸ್ಯ ಅಪ್ಪಣ್ಣ ಮುಜಗಣ್ಣವರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಮುಜಗಣ್ಣವರ, ಮುಖಂಡ ಬಾಹುಸಾಹೇಬ ಜಾಧವ, ಸಿದರಾಯ ಗೊಲಬಾವಿ, ನಾನಾಸಾಹೇಬ ತೇಲಿ, ಶಿವಾನಂದ ಅವತಾಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು