8:40 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ರಾಜ್ಯಪಾಲರ ಭೇಟಿ: ಕಾರ್ಕಳ ಉತ್ಸವಕ್ಕೆ ಆಹ್ವಾನ; ಸೌಹಾರ್ದಯುತ ಚರ್ಚೆ

04/03/2022, 19:26

ಬೆಂಗಳೂರು(reporterkarnataka.com): 
ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್
ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ.

ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿರುವ ಅವರು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದರ ಜತೆಗೆ ಉತ್ಸವದ ವೈಶಿಷ್ಟ್ಯ ಗಳನ್ನು ವಿವರಿಸಿದ್ದಾರೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಮಾರ್ಚ್ ೧೦ರಿಂದ ೨೦ರ ವರೆಗೆ ಕಾರ್ಕಳ ಉತ್ಸವ ಆಯೋಜಿಸಲಾಗಿದೆ. ತುಳು ನಾಡಿನ ಸಾಂಸ್ಕ್ರತಿಕ ಬದುಕಿನ ಅನಾವರಣದ ಜತೆಗೆ ಕೋವಿಡ್ ನಿಂದ ಏಕತಾನತೆಗೆ ಸಿಲುಕಿದ್ದ ತಾಲೂಕಿನ ಜನಜೀವನಕ್ಕೆ ಉತ್ಸಾಹ ಹಂಚುವ ಉದ್ದೇಶವನ್ನು ಉತ್ಸವ ಹೊಂದಿದೆ.

ಉತ್ಸವ ಕಾರ್ಕಳದಲ್ಲಿ ನಡೆಯುತ್ತಿದ್ದರೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈಗಾಗಲೇ ಸದ್ದು ಮಾಡುತ್ತಿದೆ. ತುಳುನಾಡಿನ ಸಾಂಸ್ಕ್ರತಿಕ ವೈಭವ ಉತ್ಸವದ ಜೀವಾಳವಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿದ್ದು, ಗಣ್ಯಾತಿಗಣ್ಯರು, ಅನಿವಾಸಿ ಕಾರ್ಕಳ ಜನರು ಸೇರಿದಂತೆ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು