1:27 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಕಾರ್ಕಳದಿಂದಲೇ ಸ್ಪರ್ಧೆ: ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

04/02/2023, 22:26

ವಿಜಯಪುರ(reporterkarnataka.com):: ಮುಂಬರುವ ವಿಧಾನಸಭೆ ಚುನಾವಣೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರು ಕಾರ್ಕಳ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಸ್ಪರ್ಧಿಸಲಿದೆ ಎಂದು ಶ್ರೀರಾಮ ಸೇನೆಯ ಆಗ್ರಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಖಡಕ್ ಉತ್ತರ ನೀಡಿದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದೇ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಬಿಜೆಪಿ ನಾಯಕರನ್ನು ಶ್ರೀರಾಮಸೇನೆ ಒತ್ತಾಯಿಸಿದೆ. ಆದರೆ ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ. ಕಾರ್ಕಳದಲ್ಲಿ ಸಚಿವ ಸುನೀಲ್ ಕುಮಾರ್ ಅವರು ಮೂರು ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮಂತ್ರಿ ಕೂಡ ಆಗಿದ್ದಾರೆ. ಶ್ರೀರಾಮ ಸೇನೆಯವರು ಮನವಿ ಮಾಡಿದ್ದಾರೆ. ಇದು ಸಹಜ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಡಾ.ಪರಮೇಶ್ವರ್
ಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದು ಅವರ ಆಂತರಿಕ ವಿಚಾರ. ಪರಮೇಶ್ವರ್ ಬಹಳ ಬುದ್ದಿವಂತರು. ಎಲ್ಲವನ್ನೂ ಅರಿತವರು. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಅವರಿಗೆ ಇಷ್ಟೇ ಸಲಹೆ ನೀಡಲು ಸಾಧ್ಯ ಎಂದು ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು