10:05 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ

31/05/2021, 21:07

ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರೆತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು.  ಆದರೂ ತಕ್ಕ ಮಟ್ಟಿಗೆ ರಾಜಕೀಯ ನಾಯಕರು ಕಿಟ್ಟನ್ನು ಒದಗಿಸಿ ಜನರಿಗೆ ಸಹಾಯ ಹಸ್ತ ನೀಡಿದ್ದರು.

ಇದೀಗ ಮಂಗಳೂರು ಮಹಾನಗರಪಾಲಿಕೆಯ ಕಾರ್ಪೊರೇಟರ್ ಒಬ್ಬರು ಯಾವುದೇ ಸದ್ದುಗದ್ದಲವಿಲ್ಲದೆ, ಪ್ರಚಾರವಿಲ್ಲದೆ ಕಿಟ್ ಹಂಚುತ್ತಿದ್ದಾರೆ. ಇವರು ಬೇರೆ ಯಾರೂ ಅಲ್ಲ, ಪ್ರವೀಣ್ ಚಂದ್ರ ಆಳ್ವ ಅವರು.ಪಾಲಿಕೆಯ ಕಂಕನಾಡಿ 49 ನೇ ಬಿ ವಾರ್ಡ್ ನ ಕಾರ್ಪೊರೇಟರ್  ಆಗಿರುವ ಪ್ರವೀಣ್ ಚಂದ್ರ ಆಳ್ವ ಸ್ವಂತ ಖರ್ಚಿನಲ್ಲಿ  ತಮ್ಮ ವಾರ್ಡಿನ ಎಲ್ಲಾ ಮತದಾರರ ಮನೆ ಮನೆಗೆ  ತೆರಳಿ ಬಡವ ಬಲ್ಲಿದ ಎಂಬ ಬೇಧ ಭಾವ ಇಲ್ಲದೆ 10 ಕೆಜಿ ಅಕ್ಕಿ,  ಉಪ್ಪಿನಕಾಯಿ ಡಬ್ಬವನ್ನು ವಿತರಿಸಲು ಪ್ರಾರಂಭಿಸಿದ್ದಾರೆ. ಇಂತಹ ಅಪರೂಪದ ಯುವ ರಾಜಕಾರಣಿ ಪ್ರತೀ ವಾರ್ಡಿಗೂ ಇರಬೇಕೆಂದು ಆ ವಾರ್ಡಿಯಾ ಜನ ಸಾಮಾನ್ಯರು  ಬಯಸುತ್ತಿದ್ದಾರೆ. ಈ ಬಗ್ಗೆ ರಿಪೋರ್ಟರ್ ಕರ್ನಾಟಕಕ್ಕೆ ಫಲಾನುಭಾವಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಯುವ ಕಾಂಗ್ರೆಸ್ ನ ಸುನಿಲ್ ಕುಮಾರ್ ಜಪ್ಪಿನಮೊಗರು ಹಾಗೂ ಅವರ ಆತ್ಮೀಯ ತಂಡ ಕಿಟ್ ವಿತರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು