5:44 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ

31/05/2021, 21:07

ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರೆತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು.  ಆದರೂ ತಕ್ಕ ಮಟ್ಟಿಗೆ ರಾಜಕೀಯ ನಾಯಕರು ಕಿಟ್ಟನ್ನು ಒದಗಿಸಿ ಜನರಿಗೆ ಸಹಾಯ ಹಸ್ತ ನೀಡಿದ್ದರು.

ಇದೀಗ ಮಂಗಳೂರು ಮಹಾನಗರಪಾಲಿಕೆಯ ಕಾರ್ಪೊರೇಟರ್ ಒಬ್ಬರು ಯಾವುದೇ ಸದ್ದುಗದ್ದಲವಿಲ್ಲದೆ, ಪ್ರಚಾರವಿಲ್ಲದೆ ಕಿಟ್ ಹಂಚುತ್ತಿದ್ದಾರೆ. ಇವರು ಬೇರೆ ಯಾರೂ ಅಲ್ಲ, ಪ್ರವೀಣ್ ಚಂದ್ರ ಆಳ್ವ ಅವರು.ಪಾಲಿಕೆಯ ಕಂಕನಾಡಿ 49 ನೇ ಬಿ ವಾರ್ಡ್ ನ ಕಾರ್ಪೊರೇಟರ್  ಆಗಿರುವ ಪ್ರವೀಣ್ ಚಂದ್ರ ಆಳ್ವ ಸ್ವಂತ ಖರ್ಚಿನಲ್ಲಿ  ತಮ್ಮ ವಾರ್ಡಿನ ಎಲ್ಲಾ ಮತದಾರರ ಮನೆ ಮನೆಗೆ  ತೆರಳಿ ಬಡವ ಬಲ್ಲಿದ ಎಂಬ ಬೇಧ ಭಾವ ಇಲ್ಲದೆ 10 ಕೆಜಿ ಅಕ್ಕಿ,  ಉಪ್ಪಿನಕಾಯಿ ಡಬ್ಬವನ್ನು ವಿತರಿಸಲು ಪ್ರಾರಂಭಿಸಿದ್ದಾರೆ. ಇಂತಹ ಅಪರೂಪದ ಯುವ ರಾಜಕಾರಣಿ ಪ್ರತೀ ವಾರ್ಡಿಗೂ ಇರಬೇಕೆಂದು ಆ ವಾರ್ಡಿಯಾ ಜನ ಸಾಮಾನ್ಯರು  ಬಯಸುತ್ತಿದ್ದಾರೆ. ಈ ಬಗ್ಗೆ ರಿಪೋರ್ಟರ್ ಕರ್ನಾಟಕಕ್ಕೆ ಫಲಾನುಭಾವಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಯುವ ಕಾಂಗ್ರೆಸ್ ನ ಸುನಿಲ್ ಕುಮಾರ್ ಜಪ್ಪಿನಮೊಗರು ಹಾಗೂ ಅವರ ಆತ್ಮೀಯ ತಂಡ ಕಿಟ್ ವಿತರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು