4:38 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ

31/05/2021, 21:07

ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರೆತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು.  ಆದರೂ ತಕ್ಕ ಮಟ್ಟಿಗೆ ರಾಜಕೀಯ ನಾಯಕರು ಕಿಟ್ಟನ್ನು ಒದಗಿಸಿ ಜನರಿಗೆ ಸಹಾಯ ಹಸ್ತ ನೀಡಿದ್ದರು.

ಇದೀಗ ಮಂಗಳೂರು ಮಹಾನಗರಪಾಲಿಕೆಯ ಕಾರ್ಪೊರೇಟರ್ ಒಬ್ಬರು ಯಾವುದೇ ಸದ್ದುಗದ್ದಲವಿಲ್ಲದೆ, ಪ್ರಚಾರವಿಲ್ಲದೆ ಕಿಟ್ ಹಂಚುತ್ತಿದ್ದಾರೆ. ಇವರು ಬೇರೆ ಯಾರೂ ಅಲ್ಲ, ಪ್ರವೀಣ್ ಚಂದ್ರ ಆಳ್ವ ಅವರು.ಪಾಲಿಕೆಯ ಕಂಕನಾಡಿ 49 ನೇ ಬಿ ವಾರ್ಡ್ ನ ಕಾರ್ಪೊರೇಟರ್  ಆಗಿರುವ ಪ್ರವೀಣ್ ಚಂದ್ರ ಆಳ್ವ ಸ್ವಂತ ಖರ್ಚಿನಲ್ಲಿ  ತಮ್ಮ ವಾರ್ಡಿನ ಎಲ್ಲಾ ಮತದಾರರ ಮನೆ ಮನೆಗೆ  ತೆರಳಿ ಬಡವ ಬಲ್ಲಿದ ಎಂಬ ಬೇಧ ಭಾವ ಇಲ್ಲದೆ 10 ಕೆಜಿ ಅಕ್ಕಿ,  ಉಪ್ಪಿನಕಾಯಿ ಡಬ್ಬವನ್ನು ವಿತರಿಸಲು ಪ್ರಾರಂಭಿಸಿದ್ದಾರೆ. ಇಂತಹ ಅಪರೂಪದ ಯುವ ರಾಜಕಾರಣಿ ಪ್ರತೀ ವಾರ್ಡಿಗೂ ಇರಬೇಕೆಂದು ಆ ವಾರ್ಡಿಯಾ ಜನ ಸಾಮಾನ್ಯರು  ಬಯಸುತ್ತಿದ್ದಾರೆ. ಈ ಬಗ್ಗೆ ರಿಪೋರ್ಟರ್ ಕರ್ನಾಟಕಕ್ಕೆ ಫಲಾನುಭಾವಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಯುವ ಕಾಂಗ್ರೆಸ್ ನ ಸುನಿಲ್ ಕುಮಾರ್ ಜಪ್ಪಿನಮೊಗರು ಹಾಗೂ ಅವರ ಆತ್ಮೀಯ ತಂಡ ಕಿಟ್ ವಿತರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು