3:19 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು