7:32 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು