9:35 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು