1:00 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸದ್ಯಕ್ಕಿಲ್ಲ ರಾಜ್ಯದಲ್ಲಿ ಲಾಕ್‌ಡೌನ್‌:  ಗಡಿ ಜಿಲ್ಲೆಗಳಲ್ಲಿ ಸಂಪೂರ್ಣ ವ್ಯಾಕ್ಸಿನೇಶನ್ ಗೆ ನಿರ್ಧಾರ; ಉತ್ತರ ಕರ್ನಾಟಕದಲ್ಲಿ ಟೆಸ್ಟ್‌ ಹೆಚ್ಚಳ 

14/08/2021, 20:52

ಬೆಂಗಳೂರು(reporterkarnataka.com) :  ಪಾಸಿಟಿವಿಟಿ ರೇಟ್‌ ಹೆಚ್ಚಳವಾಗಿರುವ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ವಾಕ್ಸಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಸದ್ಯ ಲಾಕ್ ಡೌನ್ ಹೇರದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ವ್ಯಾಕ್ಸಿನೇಷನ್‌ ಮಾಡಲು ತೀರ್ಮಾನಿಸಲಾಗಿದೆ. ಹಾಗೆ ರಾಯಚೂರು, ಗುಲ್ಬರ್ಗಾ, ಹಾವೇರಿ, ಬೀದರ್‌ , ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ಟೆಸ್ಟಿಂಗ್‌ ಹೆಚ್ಚಿಸಲು ಸೂಚಿಸಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದ್ಯಕ್ಕೆ ಲಾಕ್‌ಡೌನ್‌ ಜಾರಿ ಮಾಡದೇ ಇರಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಸಂಪೂರ್ಣವಾಗಿ ಇಳಿಕೆಯಾಗಿಲ್ಲ. ಮುಂದಿನ ಎರಡು ವಾರಗಳ ಕಾಲ ಪ್ರಸ್ತುತ ನಿಯಮಗಳೇ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಗಡಿ ಜಿಲ್ಲೆಗಳು ಹಾಗೂ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಜತೆ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು