1:39 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಭಾಭಿಷೇಕ:14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ

12/01/2026, 13:10

ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಭಾನುವಾರ ವಿಜೃಂಭಣೆಯಿಂದ ಜರಗಿತು.


ಪ್ರಾತಃ ಕಾಲ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟೇಶ್ ದೇವರ ಹಾಗೂ ಉತ್ಸವ ಶ್ರೀನಿವಾಸ ದೇವರ ವಿಗ್ರಹಗಳಿಗೆ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ ಶತಕಲಶಭಿಷೇಕಗಳು ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಮಧ್ಯಾಹ್ನ ಪೂಜೆ ಬಳಿಕ ಸಮಾರಾಧನೆ ಸಾಯಂಕಾಲ ಸ್ವರ್ಣ ಲಾಲಕಿ ಯಲ್ಲಿ ಒಂದು ಪೇಟೆ ಉತ್ಸವ ಬಳಿಕ ಶ್ರೀ ದೇವಳದಲ್ಲಿ ಪ್ರಾಕಾರೋತ್ಸವ , ವಸಂತ ಪೂಜೆ ಸಹಸ್ರಾರು ಭಜಕರ ಸಮ್ಮುಖದಲ್ಲಿ ನಡೆಯಿತು .
*ಶ್ರೀ ದೇವರಿಗೆ ಸಹಸ್ರ ಕುಂಭಾಭಿಷೇಕ:*
ಜನವರಿ 19ರಂದು ಶ್ರೀ ವೀರ ವೆಂಕಟೇಶ ದೇವರಸಹಿತ ಪರಿವಾರ ದೇವರುಗಳಿಗೆ ಸಹಸ್ರ ಕುಂಭಾಭಿಷೇಕ ನೆರವೇರಲಿದ್ದು ಐದು ದಿನಗಳ ಪರ್ಯಂತ ಶಾಸ್ತ್ರೋಕ್ತವಾಗಿ ವಿವಿಧ ವೈಧಿಕರ ಸಹಯೋಗದೊಂದಿಗೆ ವೈದಿಕ ವಿಧಿವಿಧಾನಗಳು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯರ ನೇತೃತ್ವದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಲಿದೆ. ದೇಶ ವಿದೇಶಗಳಿಂದ ಸಾವಿರಾರು ಭಜಕರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು , ಬಳಿಕ ಜನವರಿ 25ರಂದು ವರ್ಷಾಮ್ ಪ್ರತಿ ಜರಗುವ ಬ್ರಹ್ಮರಥೋತ್ಸವ ನಡೆಯಲಿರುವುದು.
ಚಿತ್ರ: ಮಂಜು ನಿರೇಶ್ವಾಲ್ಯ

ಇತ್ತೀಚಿನ ಸುದ್ದಿ

ಜಾಹೀರಾತು