10:34 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಭಾಭಿಷೇಕ:14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ

12/01/2026, 13:10

ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಭಾನುವಾರ ವಿಜೃಂಭಣೆಯಿಂದ ಜರಗಿತು.


ಪ್ರಾತಃ ಕಾಲ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟೇಶ್ ದೇವರ ಹಾಗೂ ಉತ್ಸವ ಶ್ರೀನಿವಾಸ ದೇವರ ವಿಗ್ರಹಗಳಿಗೆ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ ಶತಕಲಶಭಿಷೇಕಗಳು ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಮಧ್ಯಾಹ್ನ ಪೂಜೆ ಬಳಿಕ ಸಮಾರಾಧನೆ ಸಾಯಂಕಾಲ ಸ್ವರ್ಣ ಲಾಲಕಿ ಯಲ್ಲಿ ಒಂದು ಪೇಟೆ ಉತ್ಸವ ಬಳಿಕ ಶ್ರೀ ದೇವಳದಲ್ಲಿ ಪ್ರಾಕಾರೋತ್ಸವ , ವಸಂತ ಪೂಜೆ ಸಹಸ್ರಾರು ಭಜಕರ ಸಮ್ಮುಖದಲ್ಲಿ ನಡೆಯಿತು .
*ಶ್ರೀ ದೇವರಿಗೆ ಸಹಸ್ರ ಕುಂಭಾಭಿಷೇಕ:*
ಜನವರಿ 19ರಂದು ಶ್ರೀ ವೀರ ವೆಂಕಟೇಶ ದೇವರಸಹಿತ ಪರಿವಾರ ದೇವರುಗಳಿಗೆ ಸಹಸ್ರ ಕುಂಭಾಭಿಷೇಕ ನೆರವೇರಲಿದ್ದು ಐದು ದಿನಗಳ ಪರ್ಯಂತ ಶಾಸ್ತ್ರೋಕ್ತವಾಗಿ ವಿವಿಧ ವೈಧಿಕರ ಸಹಯೋಗದೊಂದಿಗೆ ವೈದಿಕ ವಿಧಿವಿಧಾನಗಳು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯರ ನೇತೃತ್ವದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಲಿದೆ. ದೇಶ ವಿದೇಶಗಳಿಂದ ಸಾವಿರಾರು ಭಜಕರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು , ಬಳಿಕ ಜನವರಿ 25ರಂದು ವರ್ಷಾಮ್ ಪ್ರತಿ ಜರಗುವ ಬ್ರಹ್ಮರಥೋತ್ಸವ ನಡೆಯಲಿರುವುದು.
ಚಿತ್ರ: ಮಂಜು ನಿರೇಶ್ವಾಲ್ಯ

ಇತ್ತೀಚಿನ ಸುದ್ದಿ

ಜಾಹೀರಾತು