8:05 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ವೀರ ವೆಂಕಟೇಶ ದೇವರಿಗೆ ಸಹಸ್ರ ಕುಂಭಾಭಿಷೇಕ:14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ

12/01/2026, 13:10

ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ 14ನೇ ವರ್ಷದ ಪುನಃ ಪ್ರತಿಷ್ಠಾ ವರ್ಧoತಿ ಭಾನುವಾರ ವಿಜೃಂಭಣೆಯಿಂದ ಜರಗಿತು.


ಪ್ರಾತಃ ಕಾಲ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಪ್ರಧಾನ ಶ್ರೀ ಭೂದೇವಿ ಶ್ರೀದೇವಿ ಸಹಿತ ವೀರ ವೆಂಕಟೇಶ್ ದೇವರ ಹಾಗೂ ಉತ್ಸವ ಶ್ರೀನಿವಾಸ ದೇವರ ವಿಗ್ರಹಗಳಿಗೆ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ ಶತಕಲಶಭಿಷೇಕಗಳು ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಮಧ್ಯಾಹ್ನ ಪೂಜೆ ಬಳಿಕ ಸಮಾರಾಧನೆ ಸಾಯಂಕಾಲ ಸ್ವರ್ಣ ಲಾಲಕಿ ಯಲ್ಲಿ ಒಂದು ಪೇಟೆ ಉತ್ಸವ ಬಳಿಕ ಶ್ರೀ ದೇವಳದಲ್ಲಿ ಪ್ರಾಕಾರೋತ್ಸವ , ವಸಂತ ಪೂಜೆ ಸಹಸ್ರಾರು ಭಜಕರ ಸಮ್ಮುಖದಲ್ಲಿ ನಡೆಯಿತು .
*ಶ್ರೀ ದೇವರಿಗೆ ಸಹಸ್ರ ಕುಂಭಾಭಿಷೇಕ:*
ಜನವರಿ 19ರಂದು ಶ್ರೀ ವೀರ ವೆಂಕಟೇಶ ದೇವರಸಹಿತ ಪರಿವಾರ ದೇವರುಗಳಿಗೆ ಸಹಸ್ರ ಕುಂಭಾಭಿಷೇಕ ನೆರವೇರಲಿದ್ದು ಐದು ದಿನಗಳ ಪರ್ಯಂತ ಶಾಸ್ತ್ರೋಕ್ತವಾಗಿ ವಿವಿಧ ವೈಧಿಕರ ಸಹಯೋಗದೊಂದಿಗೆ ವೈದಿಕ ವಿಧಿವಿಧಾನಗಳು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯರ ನೇತೃತ್ವದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಲಿದೆ. ದೇಶ ವಿದೇಶಗಳಿಂದ ಸಾವಿರಾರು ಭಜಕರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು , ಬಳಿಕ ಜನವರಿ 25ರಂದು ವರ್ಷಾಮ್ ಪ್ರತಿ ಜರಗುವ ಬ್ರಹ್ಮರಥೋತ್ಸವ ನಡೆಯಲಿರುವುದು.
ಚಿತ್ರ: ಮಂಜು ನಿರೇಶ್ವಾಲ್ಯ

ಇತ್ತೀಚಿನ ಸುದ್ದಿ

ಜಾಹೀರಾತು