10:34 PM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು

08/09/2024, 12:58

ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಏರ್ಪಡಿಸಲಾದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣರು ದೀಪಪ್ರಜ್ವಲನೆ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಯಾಹ ನೀಡಲಾಗುತ್ತದೆ. ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಆಶೀರ್ವಚನ ನೀಡಿದರು. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ , ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗಿತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು