6:33 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು

08/09/2024, 12:58

ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಏರ್ಪಡಿಸಲಾದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣರು ದೀಪಪ್ರಜ್ವಲನೆ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಯಾಹ ನೀಡಲಾಗುತ್ತದೆ. ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಆಶೀರ್ವಚನ ನೀಡಿದರು. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ , ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗಿತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು