12:13 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು

08/09/2024, 12:58

ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಏರ್ಪಡಿಸಲಾದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣರು ದೀಪಪ್ರಜ್ವಲನೆ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಯಾಹ ನೀಡಲಾಗುತ್ತದೆ. ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಆಶೀರ್ವಚನ ನೀಡಿದರು. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ , ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗಿತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು