4:17 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು

08/09/2024, 12:58

ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಏರ್ಪಡಿಸಲಾದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣರು ದೀಪಪ್ರಜ್ವಲನೆ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಯಾಹ ನೀಡಲಾಗುತ್ತದೆ. ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಆಶೀರ್ವಚನ ನೀಡಿದರು. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ , ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗಿತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು