7:12 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು

08/09/2024, 12:58

ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರು ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಏರ್ಪಡಿಸಲಾದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣರು ದೀಪಪ್ರಜ್ವಲನೆ ಮಾಡಿ ಸಮ್ಮೇಳನಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಯಾಹ ನೀಡಲಾಗುತ್ತದೆ. ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಆಶೀರ್ವಚನ ನೀಡಿದರು. ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ , ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗಿತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು