3:43 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಹಿಳೆಯರ, ಯುವತಿಯರ ಬಗ್ಗೆ ಅಸಭ್ಯ ಪದ, ಅಶ್ಲೀಲ ಚಿತ್ರ: ಕೊನೆಗೂ ಸೆರೆ ಸಿಕ್ಕ ಸೈಕೋಪಾತ್; ಗ್ರಾಮದ ಮುಖಂಡನಿಂದಲೇ ಕೃತ್ಯ!

10/12/2024, 15:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಹಿಳೆಯರು,ಯುವತಿಯರ ಬಗ್ಗೆ ಅಸಭ್ಯ ಪದ ಹಾಗೂ ಅಶ್ಲೀಲ ಲೈಂಗಿಕ ಚಿತ್ರಗಳನ್ನ ಬಿಡಿಸಿ ಕೆಲವರ ಹೆಸರುಗಳನ್ನ ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್ ನನ್ನು ಗ್ರಾಮಸ್ಥರು ಹೊಂಚು ಹಾಕಿ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ವರದರಾಜಸ್ವಾಮಿ ಬಡಾವಣೆಯಲ್ಲಿ ನಡೆದಿದೆ.
ಗ್ರಾಮದಲ್ಲಿ ಸಮಸ್ಯೆಗಳು ಶುರುವಾದಾಗ ನ್ಯಾಯಕ್ಕಾಗಿ ನಿಲ್ಲುತ್ತಿದ್ದ ಮುಖಂಡನಿಂದಲೇ ಕೃತ್ಯ ನಡೆದಿದೆ. ಹಲವಾರು ದಿನಗಳಿಂದ ಸೈಕೋಪಾತ್ ನ ಹಿಡಿಯಲು ಗ್ರಾಮಸ್ಥರು ಹೊಂಚು ಹಾಕಿದ್ದು ನಿನ್ನೆ ರಾತ್ರಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಸಾಕ್ಷಿ ಸಮೇತ ಈತನನ್ನ ಹಿಡಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ವರದರಾಜಸ್ವಾಮಿ ಬಡಾವಣೆ ನಿವಾಸಿ ಹಾಗೂ ಗ್ರಾಮದ ಮುಖಂಡ ಶಿವಣ್ಣ(54) ಸಿಕ್ಕಿ ಬಿದ್ದ ಸೈಕೋಪಾತ್. ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನ ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳ ಜೊತೆ ಉಲ್ಲೇಖಿಸಿ ಸುಮಾರು 50ಕ್ಕೂ ಹೆಚ್ಚು ಮನೆಗಳ ಮುಂದೆ ಇಟ್ಟಿದ್ದ ಎನ್ನಲಾಗಿದೆ.
ಇದರಿಂದಾಗಿ ಗ್ರಾಮದಲ್ಲಿ ಕೆಲ ಮಹಿಳೆಯರಿಗೆ ಹಾಗೂ ಅವರ ಕುಟುಂಬದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು. ಈ ಘಟನೆಯಿಂದಾಗಿ ಕೆಲವು ಮದುವೆ ಸಂಬಂಧಗಳು ಸಹ ಮುರಿದು ಬಿದ್ದಿದ್ದವು. ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಚಿಂತೆಗೆ ಈಡು ಮಾಡಿತ್ತು.
ಸೈಕೋಪಾತ್ ನನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು. ನಿನ್ನೆ ತಡರಾತ್ರಿ ಸೈಕಲ್ ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿಯನ್ನ ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿಸಿ ಬಿಸಿ ಕಜ್ಜಾಯಗಳನ್ನ ಕೊಟ್ಟ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.
ಶಿವಣ್ಣನ ವಿರುದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಿಸಿರುವ ಹುಲ್ಲಹಳ್ಳಿ ಠಾಣೆ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ.
ಇದರಿಂದಾಗಿ ಈಗ ಗ್ರಾಮದ ವರದರಾಜ ಸ್ವಾಮಿ ಬಡಾವಣೆಯ ನಿವಾಸಿಗಳು ಸೈಕೋ ಶಿವಣ್ಣನಿಗೆ ಇಡಿ ಶಾಪ ಹಾಕಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು