4:13 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

10/02/2025, 21:32

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ಭಾನುವಾರ ನಗರದ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ ವರ್ಗದ ಕಷ್ಟಗಳಿಗೆ ನೆರವಾಗಲಾಗಿದೆ. ಹಲವಾರು ಕುಟುಂಬಗಳ ಕಣ್ಣೀರು ಒರೆಸುವ ಕೆಲಸಗಳಾಗಿವೆ. ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಕೆಲಸ ಮಾಡುವ ಸಂಘಟನೆಯಾಗಿದೆ. ದೇವರ ಕೃಪೆ ಇದ್ದಲ್ಲಿ ನಮ್ಮ ಅಸಾಹಾಯಕತೆಯಲ್ಲೂ ಉತ್ತಮ ಕಾರ್ಯಗಳನ್ನುಮಾಡಲು ಸಾಧ್ಯವಿದೆ ಎಂದರು.
ಮಂಗಳೂರು ಸೆಂಟ್ರಲ್‌ ಕೌನ್ಸಿಲ್‌ನ ಆಧ್ಯಾತ್ಮಿಕ ಸಲಹೆಗಾರ ವಂ। ಫ್ರಾನಿಸ್‌ ಡಿ’ಸೋಜಾ ಶತಮಾನೋತ್ಸವದ ಫೋಷಣೆ ವಾಕ್ಯವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಂಗಳೂರು ಧರ್ಮಪ್ರಾಂತ್ಯದಲ್ಲಿ ಕಳೆದ ನೂರು ವರ್ಷಗಳಲ್ಲಿ ಹೊಸ ಶಕೆಯನ್ನು ಸಂಘಟನೆ ಬರೆದಿದೆ. ಹಿರಿಯರ ಮೂಲಕ ಸೇವೆ ಮಾಡಲು ಹಾಗೂ ಬಡವರ್ಗಕ್ಕೆ ನೆರವಾಗುವ ಕಾರ್ಯ ವಿಶಿಷ್ಟವಾದುದು. ವಿದ್ಯಾರ್ಥಿವೇತನ, ಬಡ ಕುಟುಂಬಗಳಿಗೆ ಆರ್ಥಿಕ ನೆರವು, ರೋಗಿಗಳಿಗೆ ಚಿಕಿತ್ಸೆಗೆ ಧನ ಸಹಾಯ ಸಹಿತ ನೂರಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಎಂದರು.


ಸೆಂಟ್ರಲ್‌ ಕೌನ್ಸಿಲ್‌ನ ಅಧ್ಯಕ್ಷ ಜ್ಯೋ ಕುವೆಲ್ಲೋ ಮಾತನಾಡಿ, ಶತಮಾನೋತ್ಸವದ ಸವಿನೆನಪಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಪ್ರಮುಖವಾಗಿ ಎಸ್‌.ಎಸ್‌.ವಿ.ಪಿ.ಯ ದತ್ತು ಕುಟಂಬಗಳ ಸುಮಾರು 408 ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು, ‘ಆಸ್ರೊ’ ನೂರು ಕುಟಂಬಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು ಅಥವಾ ದುರಸ್ತಿ ಮಾಡಲು ಧನ ಸಹಾಯ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು