3:18 PM Friday26 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

10/02/2025, 21:32

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ಭಾನುವಾರ ನಗರದ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ ವರ್ಗದ ಕಷ್ಟಗಳಿಗೆ ನೆರವಾಗಲಾಗಿದೆ. ಹಲವಾರು ಕುಟುಂಬಗಳ ಕಣ್ಣೀರು ಒರೆಸುವ ಕೆಲಸಗಳಾಗಿವೆ. ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಕೆಲಸ ಮಾಡುವ ಸಂಘಟನೆಯಾಗಿದೆ. ದೇವರ ಕೃಪೆ ಇದ್ದಲ್ಲಿ ನಮ್ಮ ಅಸಾಹಾಯಕತೆಯಲ್ಲೂ ಉತ್ತಮ ಕಾರ್ಯಗಳನ್ನುಮಾಡಲು ಸಾಧ್ಯವಿದೆ ಎಂದರು.
ಮಂಗಳೂರು ಸೆಂಟ್ರಲ್‌ ಕೌನ್ಸಿಲ್‌ನ ಆಧ್ಯಾತ್ಮಿಕ ಸಲಹೆಗಾರ ವಂ। ಫ್ರಾನಿಸ್‌ ಡಿ’ಸೋಜಾ ಶತಮಾನೋತ್ಸವದ ಫೋಷಣೆ ವಾಕ್ಯವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಂಗಳೂರು ಧರ್ಮಪ್ರಾಂತ್ಯದಲ್ಲಿ ಕಳೆದ ನೂರು ವರ್ಷಗಳಲ್ಲಿ ಹೊಸ ಶಕೆಯನ್ನು ಸಂಘಟನೆ ಬರೆದಿದೆ. ಹಿರಿಯರ ಮೂಲಕ ಸೇವೆ ಮಾಡಲು ಹಾಗೂ ಬಡವರ್ಗಕ್ಕೆ ನೆರವಾಗುವ ಕಾರ್ಯ ವಿಶಿಷ್ಟವಾದುದು. ವಿದ್ಯಾರ್ಥಿವೇತನ, ಬಡ ಕುಟುಂಬಗಳಿಗೆ ಆರ್ಥಿಕ ನೆರವು, ರೋಗಿಗಳಿಗೆ ಚಿಕಿತ್ಸೆಗೆ ಧನ ಸಹಾಯ ಸಹಿತ ನೂರಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಎಂದರು.


ಸೆಂಟ್ರಲ್‌ ಕೌನ್ಸಿಲ್‌ನ ಅಧ್ಯಕ್ಷ ಜ್ಯೋ ಕುವೆಲ್ಲೋ ಮಾತನಾಡಿ, ಶತಮಾನೋತ್ಸವದ ಸವಿನೆನಪಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಪ್ರಮುಖವಾಗಿ ಎಸ್‌.ಎಸ್‌.ವಿ.ಪಿ.ಯ ದತ್ತು ಕುಟಂಬಗಳ ಸುಮಾರು 408 ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು, ‘ಆಸ್ರೊ’ ನೂರು ಕುಟಂಬಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು ಅಥವಾ ದುರಸ್ತಿ ಮಾಡಲು ಧನ ಸಹಾಯ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು