11:38 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

10/02/2025, 21:32

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ಭಾನುವಾರ ನಗರದ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ ವರ್ಗದ ಕಷ್ಟಗಳಿಗೆ ನೆರವಾಗಲಾಗಿದೆ. ಹಲವಾರು ಕುಟುಂಬಗಳ ಕಣ್ಣೀರು ಒರೆಸುವ ಕೆಲಸಗಳಾಗಿವೆ. ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಕೆಲಸ ಮಾಡುವ ಸಂಘಟನೆಯಾಗಿದೆ. ದೇವರ ಕೃಪೆ ಇದ್ದಲ್ಲಿ ನಮ್ಮ ಅಸಾಹಾಯಕತೆಯಲ್ಲೂ ಉತ್ತಮ ಕಾರ್ಯಗಳನ್ನುಮಾಡಲು ಸಾಧ್ಯವಿದೆ ಎಂದರು.
ಮಂಗಳೂರು ಸೆಂಟ್ರಲ್‌ ಕೌನ್ಸಿಲ್‌ನ ಆಧ್ಯಾತ್ಮಿಕ ಸಲಹೆಗಾರ ವಂ। ಫ್ರಾನಿಸ್‌ ಡಿ’ಸೋಜಾ ಶತಮಾನೋತ್ಸವದ ಫೋಷಣೆ ವಾಕ್ಯವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಂಗಳೂರು ಧರ್ಮಪ್ರಾಂತ್ಯದಲ್ಲಿ ಕಳೆದ ನೂರು ವರ್ಷಗಳಲ್ಲಿ ಹೊಸ ಶಕೆಯನ್ನು ಸಂಘಟನೆ ಬರೆದಿದೆ. ಹಿರಿಯರ ಮೂಲಕ ಸೇವೆ ಮಾಡಲು ಹಾಗೂ ಬಡವರ್ಗಕ್ಕೆ ನೆರವಾಗುವ ಕಾರ್ಯ ವಿಶಿಷ್ಟವಾದುದು. ವಿದ್ಯಾರ್ಥಿವೇತನ, ಬಡ ಕುಟುಂಬಗಳಿಗೆ ಆರ್ಥಿಕ ನೆರವು, ರೋಗಿಗಳಿಗೆ ಚಿಕಿತ್ಸೆಗೆ ಧನ ಸಹಾಯ ಸಹಿತ ನೂರಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಎಂದರು.


ಸೆಂಟ್ರಲ್‌ ಕೌನ್ಸಿಲ್‌ನ ಅಧ್ಯಕ್ಷ ಜ್ಯೋ ಕುವೆಲ್ಲೋ ಮಾತನಾಡಿ, ಶತಮಾನೋತ್ಸವದ ಸವಿನೆನಪಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಪ್ರಮುಖವಾಗಿ ಎಸ್‌.ಎಸ್‌.ವಿ.ಪಿ.ಯ ದತ್ತು ಕುಟಂಬಗಳ ಸುಮಾರು 408 ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು, ‘ಆಸ್ರೊ’ ನೂರು ಕುಟಂಬಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು ಅಥವಾ ದುರಸ್ತಿ ಮಾಡಲು ಧನ ಸಹಾಯ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು