5:47 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ; ತಾಯಿ ನೋಡಲು ಬಂದಾಕೆಯ ದಾರುಣ ಅಂತ್ಯ

18/08/2023, 16:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಸಕಲೇಶಪುರ ತಾಲೂಕು ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ಕವಿತಾ (40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ವಡೂರು ಗ್ರಾಮದಲ್ಲಿ ತನ್ನ ಅಮ್ಮನನ್ನು ನೋಡಲೆಂದು ಬಂದಿದ್ದ ಕವಿತಾ ಅವರನ್ನು ಮನೆ ಬಳಿ ಇದ್ದಾಗಲೇ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು, ಕೆಳಗೆ ಬಿದ್ದ ಕವಿತಾರ ಮೇಲೆ ಆನೆ ದಾಳಿ ಮಾಡಿತ್ತು. ಸೊಂಟದ ಭಾಗವನ್ನು ತುಳಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ನಾರ್ವೇ ಮೂಲದ ಕವಿತಾ ಪತಿ ಬೈರಯ್ಯ ಇತ್ತೀಚೆಗೆ ನಿಧನ ಹೊಂದಿದ್ದರು. ಇವರಿಗೆ ಮೂವರು ಗಂಡುಮಕ್ಕಳಿದ್ದಾರೆ.

ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸತತವಾಗಿ ಜೀವಹಾನಿ ಸಂಭವಿಸುತ್ತಲೇ ಇವೆ. ಕಾಡಾನೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಳೆಗಾರರ ಸಂಘಟನೆ ಮತ್ತು ರೈತ ಸಂಘಟನೆಗಳು ಆಗ್ರಹಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು