5:57 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು