3:47 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು