5:12 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು