5:47 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ

02/09/2024, 12:29

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು.
ಈ ಹಿನ್ನಲೆಯಲ್ಲಿ ಕಾರ್ಖಾನೆಯು ಆಡಳಿತ ಅಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು, ಹಿತೈಷಿಗಳು ವಿನೂತನ ಎತ್ತಿನ ಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟುರು. ಈ ಸಂದರ್ಭದಲ್ಲಿ ಮಾತನಾಡಿದ ಸಕ್ಕರೆ ವಿಭಾಗದ ಜನರಲ್ ಮ್ಯಾನೇಜರ್ ದಿನೇಶ್ ಶರ್ಮಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ನಿವೃತ್ತಿ ಎಂಬುದು ಸರ್ವೇ ಸಾಮಾನ್ಯ ಸರ್ಕಾರದ ನಿಯಮದ ಪ್ರಕಾರ ವೃತ್ತಿಯಲ್ಲಿರುವ ವ್ಯಕ್ತಿಗೆ 60 ವರ್ಷ ಆಗುತ್ತಿದ್ದಂತೆ ವಯೋ ನಿವೃತ್ತಿ ಹೊಂದಲೇಬೇಕು. ಆದರೆ ವೃತ್ತಿಯಲ್ಲಿದ್ದಾಗ ನಾವೂ ಮಾಡಿದ ಒಳ್ಳೆಯ ಕೆಲಸ ಕಾರ್ಯ ಜನರ ಮದ್ಯೆ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ ವ್ಯಕ್ತಿ ನಿವೃತ್ತಿ ನಂತರವೂ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ. ವೃತ್ತಿಯಿಂದ ನಿವೃತ್ತಿಯಾದರು ಅವರ ಒಳ್ಳೆಯತನ ಕರ್ತವ್ಯ ನಿಷ್ಠೆ ಸ್ನೇಹ ಪರತೆಯಿಂದ ನಮ್ಮ ಹೃದಯದಲ್ಲಿ ಸದಾ ಕಾಲವಿರುತ್ತಾರೆಂದು ಹೇಳಿದರು. ಇಂಜಿನಿಯರ್ ಜಿ ಎಂ ವಿ ಕೆ ಕಿಲಾರಿ ಹಾಗೂ ಮಜದೂರ ಯುನಿಯನ್ ಅಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ ಕಾರ್ಖಾನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ವಯೋ ನಿವೃತ್ತಿ ಆಗುತ್ತಿಧದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು