3:33 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ

02/09/2024, 12:29

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು.
ಈ ಹಿನ್ನಲೆಯಲ್ಲಿ ಕಾರ್ಖಾನೆಯು ಆಡಳಿತ ಅಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು, ಹಿತೈಷಿಗಳು ವಿನೂತನ ಎತ್ತಿನ ಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟುರು. ಈ ಸಂದರ್ಭದಲ್ಲಿ ಮಾತನಾಡಿದ ಸಕ್ಕರೆ ವಿಭಾಗದ ಜನರಲ್ ಮ್ಯಾನೇಜರ್ ದಿನೇಶ್ ಶರ್ಮಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ನಿವೃತ್ತಿ ಎಂಬುದು ಸರ್ವೇ ಸಾಮಾನ್ಯ ಸರ್ಕಾರದ ನಿಯಮದ ಪ್ರಕಾರ ವೃತ್ತಿಯಲ್ಲಿರುವ ವ್ಯಕ್ತಿಗೆ 60 ವರ್ಷ ಆಗುತ್ತಿದ್ದಂತೆ ವಯೋ ನಿವೃತ್ತಿ ಹೊಂದಲೇಬೇಕು. ಆದರೆ ವೃತ್ತಿಯಲ್ಲಿದ್ದಾಗ ನಾವೂ ಮಾಡಿದ ಒಳ್ಳೆಯ ಕೆಲಸ ಕಾರ್ಯ ಜನರ ಮದ್ಯೆ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ ವ್ಯಕ್ತಿ ನಿವೃತ್ತಿ ನಂತರವೂ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ. ವೃತ್ತಿಯಿಂದ ನಿವೃತ್ತಿಯಾದರು ಅವರ ಒಳ್ಳೆಯತನ ಕರ್ತವ್ಯ ನಿಷ್ಠೆ ಸ್ನೇಹ ಪರತೆಯಿಂದ ನಮ್ಮ ಹೃದಯದಲ್ಲಿ ಸದಾ ಕಾಲವಿರುತ್ತಾರೆಂದು ಹೇಳಿದರು. ಇಂಜಿನಿಯರ್ ಜಿ ಎಂ ವಿ ಕೆ ಕಿಲಾರಿ ಹಾಗೂ ಮಜದೂರ ಯುನಿಯನ್ ಅಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ ಕಾರ್ಖಾನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ವಯೋ ನಿವೃತ್ತಿ ಆಗುತ್ತಿಧದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು